ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿಗೆ ದಿನೇಶ್ ಶೆಟ್ಟಿಗಾರ್ ಆಯ್ಕೆ
Update: 2021-09-16 13:55 GMT
ಉಡುಪಿ, ಸೆ.16: ಮೈಸೂರಿನ ವಿಶ್ವವಚನ ಫೌಂಡೇಷನ್ ನೀಡುವ 2021ನೇ ಸಾಲಿನ ರಾಜ್ಯಮಟ್ಟದ ಚಿನ್ಮಯಜ್ಞಾನಿ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಿಂದ ಪರ್ಕಳದ, ಈಗ ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನದ ಸಹಶಿಕ್ಷಕರಾಗಿರುವ ದಿನೇಶ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಿಂದ ಒಟ್ಟು 23 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಡಬ ತಾಲೂಕು ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಉಪನ್ಯಾಸಕರಾದ ಬಿ.ವಿ.ಸೂರ್ಯನಾರಾಯಣರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಫೌಂಡೇಷನ್ನ ಪ್ರಕಟಣೆ ತಿಳಿಸಿದೆ.