ಎಂಸಿಸಿ ಬ್ಯಾಂಕ್ ವತಿಯಿಂದ ಸಿಎ ಸಾಧಕಿಗೆ ಸನ್ಮಾನ

Update: 2021-09-16 15:32 GMT

ಮಂಗಳೂರು, ಸೆ.16: ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯು (ಐಸಿಎಐ) ನಡೆಸಿದ ರಾಷ್ಟ್ರಮಟ್ಟದ ಸಿ.ಎ. ಪರೀಕ್ಷೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿದ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ಅವರನ್ನು ಎಂಸಿಸಿ ಬ್ಯಾಂಕ್ ವತಿಯಿಂದ ಬುಧವಾರ ಸನ್ಮಾನಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೊಯ್ಲಸ್ ಡಿಸೋಜ ಅವರನ್ನು ಕೂಡ ಸನ್ಮಾನಿಸಲಾ ಯಿತು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ಸನ್ಮಾನ ಪತ್ರವನ್ನು ವಾಚಿಸಿದರು.

ಬ್ಯಾಂಕಿನ ನಿರ್ದೇಶಕರಾದ ಅನಿಲ್ ಪತ್ರಾವೊ, ಎಲ್‌ರೋಯ್ ಕಿರಣ್ ಕ್ರಾಸ್ಟೊ, ಜೆ. ಪಿ. ರೊಡ್ರಿಗಸ್, ಡೇವಿಡ್ ಡಿಸೋಜ, ಆ್ಯಂಡ್ರು ಡಿಸೋಜ, ಮಾರ್ಸೆಲ್ ಡಿಸೋಜ, ರೋಶನ್ ಡಿಸೋಜ, ಹೆರಾಲ್ಡ್ ಮೊಂತೇರೊ, ಡೊಲ್ಫಿ ಪತ್ರಾವೊ, ಪ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕ ಸಿ.ಜಿ.ಪಿಂಟೊ, ಉಪ ಮಹಾಪ್ರಬಂಧಕ ರಾಜ್ ಮಿನೇಜಸ್, ರೂತ್ ಕ್ಲೆರ್ ಡಿಸಿಲ್ವಾರ ಪೋಷಕರಾದ ರೂಪರ್ಟ್ ಡಿಸಿಲ್ವಾ ಹಾಗೂ ರೋಜಿ ಮರಿಯ ಡಿಸಿಲ್ವಾ ಉಪಸ್ಥಿತರಿದ್ದರು.

ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿದರು, ಬ್ಯಾಂಕಿನ ನಿರ್ದೇಶಕಿ ಐರಿನ್ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News