ರಾಜ್ಯದಲ್ಲಿಂದು 1,108 ಮಂದಿಗೆ ಕೊರೋನ ದೃಢ , 18 ಮಂದಿ ಸಾವು

Update: 2021-09-16 15:55 GMT

ಬೆಂಗಳೂರು, ಸೆ.16: ರಾಜ್ಯದಲ್ಲಿ ಗುರುವಾರ 1,108 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 18 ಜನರು ಸೋಂಕಿಗೆ ಬಲಿಯಾಗಿದ್ದು, 809 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,65,191ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,555ಕ್ಕೆ ತಲುಪಿದೆ. 

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 15,174ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

18 ಸೋಂಕಿತರು ಬಲಿ: ಬೆಳಗಾವಿ 4, ಬೆಂಗಳೂರು ನಗರ 5, ಚಾಮರಾಜನಗರ 1, ದಕ್ಷಿಣ ಕನ್ನಡ 2, ದಾವಣಗೆರೆ 1, ಹಾಸನ 1, ಕೊಡಗು 1, ಕೋಲಾರ 1, ಮೈಸೂರು 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,108 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 7, ಬೆಳಗಾವಿ 38, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 308, ಬೀದರ್ 3, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 63, ಚಿತ್ರದುರ್ಗ 9, ದಕ್ಷಿಣ ಕನ್ನಡ 186, ದಾವಣಗೆರೆ 9, ಧಾರವಾಡ 6, ಗದಗ 3, ಹಾಸನ 64, ಕಲಬುರಗಿ 6, ಕೊಡಗು 9, ಕೋಲಾರ 19, ಕೊಪ್ಪಳ 2, ಮಂಡ್ಯ 26, ಮೈಸೂರು 87, ರಾಮನಗರ 8, ಶಿವಮೊಗ್ಗ 44, ತುಮಕೂರು 24, ಉಡುಪಿ 113, ಉತ್ತರ ಕನ್ನಡ 45, ವಿಜಯಪುರ ಜಿಲ್ಲೆಯಲ್ಲಿ 3  ಪ್ರಕರಣ ಪತ್ತೆಯಾಗಿವೆ. 

ರಾಜಧಾನಿಯಲ್ಲಿ 308 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಗುರುವಾರದಂದು 308 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,42,640 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,070 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,19,141 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News