ಇ-ಕೆವೈಸಿ ನೊಂದಣಿಗೆ ಅವಧಿ ವಿಸ್ತರಣೆ

Update: 2021-09-16 16:24 GMT

ಉಡುಪಿ, ಸೆ.16: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆ.16ರಿಂದ 30ರವರೆಗೆ ಪ್ರತಿದಿನ ಅಪರಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಲು ಇ-ಕೆವೈಸಿಗೆ ಅವಕಾಶವನ್ನು ಕಲ್ಪಿಸಲಾಗಿದೆ.

ಇ-ಕೆವೈಸಿ ನೊಂದಾವಣೆ ಮಾಡಿಕೊಳ್ಳದೇ ಇರುವ ಪಡಿತರ ಚೀಟಿದಾರರ ಆಹಾರ ಧಾನ್ಯ ಹಂಚಿಕೆಯು ಮುಂದಿನ ದಿನಗಳಲ್ಲಿ ಸ್ಥಗಿತಗೊಂಡಾಗ ಪಡಿತರ ಚೀಟಿದಾರರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News