ರಾಜ್ಯಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿಗೆ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಆಯ್ಕೆ

Update: 2021-09-16 16:53 GMT

ಪುತ್ತೂರು: ಮೈಸೂರಿನ ಶರಣ ವಿಶ್ವವಚನ ಫೌಂಡೇಶನ್ ನಿಂದ ನೀಡಲ್ಪಡುವ  2021ನೇ ಸಾಲಿನ ರಾಜ್ಯಮಟ್ಟದ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿಗೆ ಸವಣೂರು ಪ.ಪೂ.ಕಾಲೇಜ್ ನ ಆಂಗ್ಲ ಭಾಷಾ ಉಪನ್ಯಾಸಕ ಬಿ.ವಿ ಸೂರ್ಯನಾರಾಯಣ ದ.ಕ.ಜಿಲ್ಲೆಯಿಂದ ಆಯ್ಕೆಯಾಗಿ ದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಸೆ.26ರಂದು ಮೈಸೂರಿನಲ್ಲಿ ನಡೆಯಲಿದೆ.

ಬಿ.ವಿ.ಸೂರ್ಯನಾರಾಯಣ ಅವರು ಸವಣೂರು ಪ.ಪೂ.ಕಾಲೇಜಿಗೆ ಸುಮಾರು 1.20  ಕೋಟಿ ದೇಣಿಗೆಯನ್ನು ದಾನಿಗಳಿಂದ ಸಂಗ್ರಹಿಸಿ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ವಾಚನಾಲಯ, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳನ್ನು ಸಂಸ್ಥೆಗೆ ಕಲ್ಪಿಸಿದಲ್ಲದೆ ,ಸುಮಾರು 500 ಕ್ಕೂ ಮಿಕ್ಕಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಧೃತಿ ಫೌಂಡೇಶನ್ ಮಂಗಳೂರು ಸಂಸ್ಥೆಯ ಸ್ವಯಂ ಸೇವಕನಾಗಿ ಆರ್ಥಿಕ ನೆರವನ್ನು ಒದಗಿಸಿದ್ದಾರೆ.

ಅಲ್ಲದೆ ಉತ್ತಮ ತರಬೇತುದಾರರಾಗಿ ನಾಡಿನ ವಿವಿಧೆಡೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತು ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದ್ದಾರೆ. ಇವರು ಕಳೆದ 38 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News