ಅಪರಿಚಿತ ವಾಹನ ಢಿಕ್ಕಿ: ಪತ್ರಕರ್ತ ಮೃತ್ಯು

Update: 2021-09-16 18:41 GMT

ಕೋಲಾರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಕೋಲಾರ ಜಿಲ್ಲಾ ಕೇಂದ್ರದಲ್ಲಿ ಸ್ಪೀಡ್ ನ್ಯೂಸ್ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಹನುಮಂತ್ ಯಾದವ್ ಗುರುವಾರ ರಾತ್ರಿ ಸುಮಾರು 8.30 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಕೋಲಾರದಲ್ಲಿ ಕೆಲಸ ಮುಗಿಸಿ  ಮುಳಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಹಿಂತಿರುಗುತಿದ್ದಾಗ ಕಮದಟ್ಟಿ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಳಬಾಗಿಲು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News