ಮನೆಗೆ ನುಗ್ಗಿ ನಗ- ನಗದು ಕಳವು

Update: 2021-09-17 13:32 GMT

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆಯ ಬೆಣಪು ಎಂಬಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ- ನಗದನ್ನು ದೋಚಿದ ಘಟನೆ ನಡೆದಿದೆ. ಘಟನೆ ಗುರುವಾರ ರಾತ್ರಿ ಬೆಳಕಿಗೆ ಬಂದಿದೆ.

ಅಬೂಬಕ್ಕರ್ ಮದನಿ ತನ್ನ ಕುಟುಂಬ ಸದಸ್ಯರೊಂದಿಗೆ ಬುಧವಾರ ಬೆಳಗ್ಗೆ ಮಂಗಳೂರಿನಲ್ಲಿರುವ ತನ್ನ ಮಗನ ಮನೆಗೆ ಗೃಹ ಪ್ರವೇಶ ಕಾರ್ಯಕ್ರಮಕ್ಕಾಗಿ ಹೋಗಿದ್ದು, ಗುರುವಾರ ರಾತ್ರಿ ಹಿಂದಿರುಗಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಮನೆಯ ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನ ಹಾಗೂ 1.20 ಲಕ್ಷ ರೂ. ನಗದು  ದೋಚಿದ್ದಾರೆ ಎಂದು  ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News