ಕೋಟ: ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಅಂಧರಿಗೆ ನೆರವು

Update: 2021-09-17 14:23 GMT

ಕೋಟ, ಸೆ.17: ದೇಶದ ಪ್ರಧಾನಿಯ 71ನೇ ಹುಟ್ಟುಹಬ್ಬವನ್ನು ಸೇವಾ ಚಟು ವಟಿಕೆ ನಡೆಸುವುದರೊಂದಿಗೆ ಆಚರಿಸುತ್ತಿದ್ದೇವೆ. ನರೇಂದ್ರ ಮೋದಿಯವರಿಗೆ ಸೇವಾ ಕಾರ್ಯ ಅಂದರೆ ಹೆಚ್ಚು ಖುಷಿ ಕೊಡುವ ಕೆಲಸ. ಈ ಸೇವಾ ಕಾರ್ಯ ದಿಂದ ನರೇಂದ್ರ ಮೋದಿಯವರ ಆಯುಸ್ಸು ಹೆಚ್ಚಾಗಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕೋಟ ಮಂಗಲ್ಯಮಂದಿರ ದಲ್ಲಿ ಆಯೋಜಿಸಲಾದ ಅಂಧರಿಗೆ ನೆರವು ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪ ಪೈ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಕುಂದಾಪುರ ಮಂಡಲ ಕ್ಷೇತ್ರಾಧ್ಯಕ್ಷ ಶಂಕರ ಅಂಕದಕಟ್ಟೆ, ಕೋಟ ಗ್ರಾಪಂ ಅಧ್ಯಕ್ಷ ಅಜಿತ್ ದೇವಾಡಿಗ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತ ಶೆಟ್ಟಿ ಹಾಗೂ ಪ್ರಮೀಳಾ ಹರೀಶ್, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಸಾಲಿಗ್ರಾಮ ಪ. ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕೊಡ್ಗಿ, ಉದಯ್ ಕುಮಾರ್ ಶೆಟ್ಟಿ, ಗೀತಾಂಜಲಿ ಸುವರ್ಣ, ಸದಾನಂದ ಉಪ್ಪಿನಕುದ್ರು ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News