ಬೆಂಗಳೂರು: 9 ತಿಂಗಳ ಮಗುವನ್ನು ಕೊಲೆಗೈದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Update: 2021-09-17 18:00 GMT

ಬೆಂಗಳೂರು, ಸೆ.17: ಒಂಭತ್ತು ತಿಂಗಳ ಮಗುವನ್ನು ಕೊಲೆಗೈದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗರಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಭಾರತಿ (50), ಸಿಂಚನಾ(33), ಸಿಂಧುರಾಣಿ(30),ಮಧು ಸಾಗರ(27) ಎಂದು ಗುರುತಿಸಲಾಗಿದ್ದು, ಕೊಲೆಯಾಗಿರುವ ಮಗುವನ್ನು 9 ತಿಂಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಿಕೆಯ ಸಂಪಾದಕ ಶಂಕರ್ ಎನ್ನುವರ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಲ್ವರು ಕಳೆದ ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸತತ ದುರ್ವಾಸನೆ ಬರುತ್ತಿದ್ದ ಕಾರಣಕ್ಕಾಗಿ ಸ್ಥಳೀಯರು ಪೊಲೀಸರಿಗೆ ನೀಡಿದ ಮಾಹಿತಿ ಅನ್ವಯ ಈ ಪ್ರಕರಣ ಬೆಳಕಿಗೆ ಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು, ಘಟನೆ ಬಗ್ಗೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಬದುಕುಳಿದ ಮೂರು ವರ್ಷದ ಮಗು 

ಘಟನೆಯಲ್ಲಿ ಅದೃಷ್ಟವಶಾತ್ ಮೂರು ವರ್ಷದ ಮಗುವೊಂದು ಪಾರಾಗಿದ್ದು, ಕಳೆದ ಐದು ದಿನದಿಂದ ಅನ್ನ ನೀರಿಲ್ಲದೇ ಮಗು ಆ ಮನೆಯಲ್ಲಿ ಉಳಿದುಕೊಂಡಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News