ಉಪ್ಪುಂದ: ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ

Update: 2021-09-17 16:57 GMT

ಕುಂದಾಪುರ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದ ತಾರಾಪತಿ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಗುಚಿ ಇಬ್ಬರು ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆಯ ಸುಮಾರಿಗೆ ನಡೆದಿದೆ.

ನಾಪತ್ತೆಯಾದ ಮೀನುಗಾರರು ಶರಣ್ ( 25 ) ಮತ್ತು ಅಣ್ಣಪ್ಪ (30) ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ, ನಾಪತ್ತೆಯಾದ ಮೀನುಗಾರರ ಹುಡುಕಾಟ ಕಾರ್ಯ ನಡೆಸುತ್ತಿದ್ದಾರೆ. 

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News