ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಅಮರಿಂದರ್ ಸಿಂಗ್ ಸಿದ್ಧತೆ
Update: 2021-09-18 10:44 GMT
ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ
ಪಂಜಾಬ್ ರಾಜ್ ಭವನ ಗೇಟ್ ನಲ್ಲಿ ಸಂಜೆ 4:30 ಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಂಜಾಬ್ ಸಿಎಂ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಹೇಳಿದ್ದಾರೆ.
ಶನಿವಾರ ಸಂಜೆ 5 ಗಂಟೆಗೆ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ಶಾಸಕರ ಸಭೆಯನ್ನು ಕರೆಯಲಾಗಿದ್ದು, ಸಭೆಗೆ ಮೊದಲೇ ಅಮರಿಂದರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮೊದಲು ಮುಖ್ಯಮಂತ್ರಿಯನ್ನು ಬದಲಿಸಬೇಕೆಂದು ಪಂಜಾಬ್ ಕಾಂಗ್ರೆಸ್ ನ 80 ಶಾಸಕರ ಪೈಕಿ 50 ಶಾಸಕರು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.