​ಬಾಲ ಕಾರ್ಮಿಕ, ಕಿಶೋರ ಕಾರ್ಮಿಕರ ಸಮೀಕ್ಷೆ: ಅರ್ಜಿ ಆಹ್ವಾನ

Update: 2021-09-18 13:29 GMT

ಉಡುಪಿ, ಸೆ.18: ಉಡುಪಿ ಜಿಲ್ಲಾ ವ್ಯಾಪ್ತಿಯೊಳಗಿನ ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂಸ್ಥೆ, ಸಕ್ಷಮ ನೋಂದಣಾಧಿಕಾರಿಗಳಲ್ಲಿ ನೊಂದಣಿ ಹೊಂದಿರಬೇಕು ಮತ್ತು ಕನಿಷ್ಟ 3 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿ ರಬೇಕು. ಕಾಲಕಾಲಕ್ಕೆ ನವೀಕರಿಸಿದ ಪ್ರಮಾಣ ಪತ್ರ ಹೊಂದಿರಬೇಕು. ಈ ಹಿಂದೆ ಇಂತಹ ಯಾವುದಾದರೂ ಸಮೀಕ್ಷೆ ನಡೆಸಿದ ಅನುಭವ ಹೊಂದಿದ್ದು, ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು.

ಅರ್ಜಿ ಅಲ್ಲಿಸಲು ಸೆ.23 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿ ಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಾರಿಗಳ ಕಛೇರಿಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ದೂರವಾಣಿ ಸಂಖ್ಯೆ: 0820-2574977, ಮೊಬೈಲ್ ಸಂಖ್ಯೆ: 8553141512 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಕೂಮಾರ್ ರಾವ್ ಎಂ ಅವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News