94ಸಿ, 94ಸಿಸಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2021-09-18 15:38 GMT

ಉಡುಪಿ, ಸೆ.18: ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 94ಸಿ ಮತ್ತು 94ಸಿಸಿ ಅಡಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು 2022ರ ಮಾ.31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಆದರೆ ಕಾಪು ತಾಲೂಕಿನಲ್ಲಿ ತಂತ್ರಾಂಶದಲ್ಲಿ ತಾಂತ್ರಿಕ ತೊಡಕು ಇರುವುದ ರಿಂದ ಅರ್ಜಿಗಳನ್ನು ಸ್ವೀಕರಿಸಿರುವುದಿಲ್ಲ. ಪ್ರಸ್ತುತ ತಾಂತ್ರಿಕ ತೊಡಕು ಬಗೆಹರಿದಿದ್ದು, ಸರಕಾರದ ನಿಯಮಾವಳಿಯಂತೆ 2015ರ ಜ.1ರ ಪೂರ್ವದಲ್ಲಿ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮನೆ ಕಟ್ಟಿ ಕೊಂಡು ವಾಸವಿರುವ ಅರ್ಹ ಫಲಾನುಭವಿಗಳು ತಾಲೂಕು ಕಚೇರಿಯ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ನಿಗದಿತ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು ಎಂದು ಕಾಪು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News