ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ

Update: 2021-09-18 15:47 GMT
ರಮೇಶ್ ಕಾಂಚನ್

ಉಡುಪಿ, ಸೆ.18: ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ನೇಮಕಾತಿ ಆದೇಶ ಹೊರಡಿ ಸಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಆದೇಶದ ಪ್ರತಿ ಯನ್ನು ಶನಿವಾರ ರವೆುೀಶ್ ಕಾಂಚನ್‌ಗೆ ಹಸ್ತಾಂತರಿಸಿದರು.

ರಮೇಶ್ ಕಾಂಚನ್ ಉಡುಪಿ ತಾಪಂ ಸದಸ್ಯರಾಗಿ, ಉಡುಪಿ ನಗರಸಭಾ ಸದಸ್ಯರಾಗಿ, ಪ್ರಸಕ್ತ ನಗರಸಭೆಯ ವಿರೋಧ ಪಕ್ಷದ ನಾಯಕರಾಗಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಮೊಗವೀರ ಸಂಘಟನೆಯ ಜಿಲ್ಲಾ ಘಟಕದ ಸ್ಥಾಪಕ ಉಪಾಧ್ಯಕ್ಷರಾಗಿ, ಮಣಿಪಾಲ ರಿಕ್ಷಾ ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷರಾಗಿ, ಶೀರೂರು ಮಠ ಹಾಗೂ ಪುತ್ತಿಗೆ ಮಠಗಳ ಪರ್ಯಾಯದಲ್ಲಿ ಹಿರಿಯಡ್ಕ ವಿಭಾಗದ ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷರಾಗಿ, ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟದ ಆರ್ಥಿಕ ಸಮಿತಿಯ ಅಧ್ಯಕ್ಷರಾಗಿ, ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಸಮಿತಿಯ ಮಾದಕ ವ್ಯಸನ ವಿಮೋಚನಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News