ಬೆಳಗಾವಿ: ಕೊಳವೆ ಬಾವಿಯಲ್ಲಿ ಮಗುವಿನ ಮೃತದೇಹ ಪತ್ತೆ; ಕೊಲೆ ಶಂಕೆ

Update: 2021-09-18 15:50 GMT
ಸಾಂದರ್ಭಿಕ ಚಿತ್ರ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಎರಡು ವರ್ಷದ ಮಗುವಿನ ಮೃತದೇಹ ಪಾಳು ಬಿದ್ದ ಕೊಳವೆ ಬಾವಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ತೋಟದ ಮನೆಯ ಪಕ್ಕದ ಕೊಳವೆಬಾವಿಯಿಂದ ಮಗುವಿನ ಮೃತದೇಹವನ್ನು ಹೊರ ತೆಗೆಯುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. 

ಎರಡು ವರ್ಷದ ಮಗು ಶರತನನ್ನು ತಂದೆ ಸಿದ್ದಪ್ಪ ಕೊಲೆ ಮಾಡಿದ್ದಾನೆ ಎಂದು ಮಗುವಿನ ಅಜ್ಜಿ ಆರೋಪಿಸಿದ್ದಾರೆನ್ನಲಾಗಿದೆ. ಪೋಲೀಸರು ಮೃತ ಬಾಲಕನ ತಂದೆ ಸಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಗುವಿನ ಮೃತದೇಹವನ್ನು ಕೊಳವೆಬಾವಿಯಿಂದ ಹೊರ ತೆಗೆಯಲಾಗಿದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News