ಹೊಸ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿಗೆ ಅಮರಿಂದರ್ ಶುಭಾಶಯ

Update: 2021-09-19 15:28 GMT

ಹೊಸದಿಲ್ಲಿ: ಕಾಂಗ್ರೆಸ್ ರಾಜ್ಯ ಘಟಕದಲ್ಲಿ ತಿಂಗಳುಗಳ ಕಾಲ ನಡೆದ ಬಣಗಳ ವೈಷಮ್ಯದ ನಂತರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ ಕ್ಯಾಪ್ಟನ್ ಅಮರಿಂದರ್ ಸಿಂಗ್  ಇಂದು ಅವರ ಉತ್ತರಾಧಿಕಾರಿ ಚರಣಜಿತ್ ಸಿಂಗ್ ಚನ್ನಿಗೆ ಶುಭ ಹಾರೈಸಿದರು. ದಲಿತ ಮುಖಂಡ ಚನ್ನಿ  ಅವರನ್ನು ನೂತನ ಸಿಎಂ ಆಗಿ ಕಾಂಗ್ರೆಸ್ ಪಕ್ಷ ಇಂದು ಘೋಷಿಸಿದೆ.

ಸಿಂಗ್ ಅವರ ಸಂದೇಶವನ್ನು ಅವರ ಮಾಧ್ಯಮ ಸಲಹೆಗಾರ ರವೀಣ್ ತುಕ್ರಲ್ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಚರಣಜಿತ್ ಸಿಂಗ್ ಚನ್ನಿಗೆ ನನ್ನ ಶುಭ ಹಾರೈಕೆಗಳು. ಅವರು ಪಂಜಾಬ್ ಗಡಿ ರಾಜ್ಯವನ್ನು ಸುರಕ್ಷಿತವಾಗಿಡಲು ಹಾಗೂ  ನಮ್ಮ ಜನರನ್ನು ಗಡಿಯುದ್ದಕ್ಕೂ ಹೆಚ್ಚುತ್ತಿರುವ ಭದ್ರತಾ ಬೆದರಿಕೆಯಿಂದ ರಕ್ಷಿಸಲು ಸಾಧ್ಯವಿದೆ ಎಂದು ನಾನು ಭಾವಿಸುತ್ತೇನೆ" ಎಂದು ಸಿಂಗ್ ಸಂದೇಶದಲ್ಲಿ ತಿಳಿಸಿದ್ದಾರೆ.

ಮಾಜಿ ಭಾರತೀಯ ಸೇನಾ ಕ್ಯಾಪ್ಟನ್  ಅಮರಿಂದರ್ ಸಿಂಗ್ ಕಳೆದ ಕೆಲವು ದಿನಗಳಿಂದ ತನ್ನ ರಾಜ್ಯದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆಯ ವಿಷಯವನ್ನು ಪದೇ ಪದೇ ಒತ್ತಿ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News