​ಶಿಕ್ಷಕನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದ ವಿದ್ಯಾರ್ಥಿ !

Update: 2021-09-20 03:55 GMT

ಹೊಸದಿಲ್ಲಿ : ತರಗತಿಯಲ್ಲಿ ಸರಿಯಾಗಿ ಕುಳಿತುಕೊಳ್ಳಲು ವಿದ್ಯಾರ್ಥಿಗೆ ತಾಕೀತು ಮಾಡಿದ ಶಿಕ್ಷಕರೊಬ್ಬರ ಮೇಲೆ ಕಬ್ಬಿಣದ ರಾಡ್‌ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ರಾಷ್ಟ್ರ ರಾಜಧಾನಿಯ ಹೊರವಲಯದ ಹಣಹೊಲದಲ್ಲಿ ನಡೆದಿದೆ.

21 ವರ್ಷ ವಯಸ್ಸಿನ ಆರೋಪಿ ವಿದ್ಯಾರ್ಥಿ ಎರಡು ಬಾರಿ ಹನ್ನೊಂದನೇ ತರಗತಿಯಲ್ಲಿ ಅನುತ್ತೀರ್ಣನಾಗಿ ಮತ್ತೆ ತರಗತಿಗೆ ಬರುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಸರ್ಕಾರಿ ಬಾಲಕರ ಸೀನಿಯರ್ ಸೆಕೆಂಡರಿ ಸ್ಕೂಲ್ ತರಗತಿಯಲ್ಲಿ ಸರಿಯಾಗಿ ಕುಳಿತುಕೊಳ್ಳುವಂತೆ ಈತನಿಗೆ ಶಿಕ್ಷಕ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಲಲಿತ್ (21) ಕಬ್ಬಿಣದ ರಾಡ್ ತೆಗೆದುಕೊಂಡು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಎಂದು ವಿವರಿಸಿದ್ದಾರೆ.

ಆರೋಪಿ ವಿದ್ಯಾರ್ಥಿ ವಿರುದ್ಧ ಭಾರತೀಯ ಡಂಡ ಸಂಹಿತೆಯ ಸೆಕ್ಷನ್ 308ರ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News