ಸಿಎ ರ್ಯಾಂಕ್ ವಿಜೇತ ವಿದ್ಯಾರ್ಥಿನಿಗೆ 50,000 ರೂ. ಪುರಸ್ಕಾರ

Update: 2021-09-20 14:07 GMT

ಕುಂದಾಪುರ, ಸೆ.20: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ 29ನೇ ರ್ಯಾಂಕ್ ಪಡೆದ ಕುಂದೇಶ್ವರ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(ಸ್ಪೇಸ್) ತರಬೇತಿ ಸಂಸ್ಥೆಯ ವೈಷ್ಣವಿ ಎಂ.ವಿ. ಅವರನ್ನು ಇಂದು ಸನ್ಮಾನಿಸಲಾಯಿತು.

ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವೈಷ್ಣವಿ ಅವರಿಗೆ ಸಂಸ್ಥೆಯ ವತಿಯಿಂದ 50 ಸಾವಿರ ರೂ. ನಗದು ಬಹುಮಾನವನ್ನು ಸಂಸ್ಥೆಯ ಸಂಸ್ಥಾಪಕರುಗಳಾದ ಪ್ರತಾಪಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಮತ್ತು ಸುಜ್ಞಾನ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ವಿತರಿಸಿದರು. ಸಂಸ್ಥೆಯ ಸಿಎ ಫೌಂಡೇಶನ್‌ನ 41 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News