ಪ್ರಮುಖ ಧಾರ್ಮಿಕ ಸಂಘಟನೆಯ ಮುಖ್ಯಸ್ಥ ನರೇಂದ್ರ ಗಿರಿ ಆತ್ಮಹತ್ಯೆ: ಉತ್ತರಪ್ರದೇಶ ಪೊಲೀಸ್

Update: 2021-09-20 15:04 GMT

ಹೊಸದಿಲ್ಲಿ: ಪ್ರಮುಖ  ಧಾರ್ಮಿಕ ಸಂಘಟನೆಯಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ತಿನ ಮುಖ್ಯಸ್ಥ ನರೇಂದ್ರ ಗಿರಿ ಉತ್ತರ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ಅತ್ಯಂತ ದೊಡ್ಡ ಸಂತರ ಧಾರ್ಮಿಕ ಸಂಘಟನೆಗಳ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಪ್ರಯಾಗರಾಜ್‌ನಲ್ಲಿರುವ ತಮ್ಮ  ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

"ಅಖಾಡ ಪರಿಷತ್ ಅಧ್ಯಕ್ಷರಾದ ನರೇಂದ್ರ ಗಿರಿ ಜೀ ಅವರ ಸಾವು ಅತ್ಯಂತ ದುಃಖಕರವಾಗಿದೆ. ಆಧ್ಯಾತ್ಮಿಕ ಸಂಪ್ರದಾಯಗಳಿಗೆ ಅರ್ಪಿತರಾಗಿದ್ದ ಅವರು ಸಂತ ಸಮಾಜದ ಅನೇಕರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಗವಂತನ ಪಾದದಲ್ಲಿ ಅವರಿಗೆ ಸ್ಥಾನ ಸಿಗಲಿ. ಓಂ ಶಾಂತಿ’’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News