ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ: ಸಂಪಾದಕ ವಿಚಾರಣೆಗೆ ಹಾಜರು

Update: 2021-09-20 16:37 GMT

ಬೆಂಗಳೂರು, ಸೆ.20: ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಆರೋಪ ಪ್ರಕರಣ ಸಂಬಂಧ ವಾರಪತ್ರಿಕೆ ಸಂಪಾದಕ ಹಲ್ಲೆಗೆರೆ ಶಂಕರ್ ಅನ್ನು ಪೊಲೀಸರು ವಿಚಾರಣೆಗೊಳಪಡಿಸಿದರು.

ಆತ್ಮಹತ್ಯೆ ಮಾಡಿಕೊಂಡ ಮನೆಯಲ್ಲಿ ಮೂರು ಡೆತ್ ನೋಟ್ ಪತ್ತೆಯಾಗಿದ್ದು, ಈ ಸಂಬಂಧ ನೀಡಿದ್ದ ನೋಟಿಸ್‍ಗೆ ಪೊಲೀಸರ ಮುಂದೆ ಶಂಕರ್ ವಿಚಾರಣೆಗೆ ಹಾಜರಾಗಿ, ಲಿಖಿತ ರೂಪದಲ್ಲಿ ಹೇಳಿಕೆಗಳನ್ನು ದಾಖಲಿಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News