ಕೋಟ್ಪಾ ದಾಳಿ; ಪ್ರಕರಣ ದಾಖಲು

Update: 2021-09-20 17:19 GMT

ಉಡುಪಿ, ಸೆ.20: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟ ಅಂಗಡಿಗಳು, ಹೋಟೆಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಒಟ್ಟು 31 ಪ್ರಕರಣಗಳನ್ನು ದಾಖಲಿಸಿ 5,200 ರೂಗಳನ್ನು ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಹಿರಿಯ ಆಹಾರ ಸುರಕ್ಷಣಾಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ವಿಚಾರಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗರ್, ಕಾರ್ಮಿಕ ಇಲಾಖೆಯ ನಿರೀಕ್ಷಕ ಪ್ರವೀಣ್ ಕುಮಾರ್, ಉಡುಪಿ ತಾಲೂಕಿನ ದೈಹಿಕ ಪರೀಕ್ಷಣಾಧಿಕಾರಿ ಎಚ್ ಗೋಪಾಲ್ ಶೆಟ್ಟಿ, ಜಿಲ್ಲಾ ಅಸಾಂಕ್ರಮಿಕ ರೋಗಗಳ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಅಂಜಲಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News