ಡಿಜೆ-ಕೆಜಿಹಳ್ಳಿ ಗಲಭೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

Update: 2021-09-21 16:29 GMT

ಬೆಂಗಳೂರು, ಸೆ.21: ಡಿಜೆ-ಕೆಜಿಹಳ್ಳಿ ಗಲಭೆ ಆರೋಪ ಪ್ರಕರಣ ಸಂಬಂಧ ಓರ್ವನನ್ನು ಎನ್‍ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ತಬ್ರೇಝ್(35) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ಆಗಸ್ಟ್‍ನಲ್ಲಿ ಡಿಜೆ-ಕೆಜಿಹಳ್ಳಿ ಗಲಭೆ ನಡೆದಿತ್ತು. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಲ್ಲದೇ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಕಾರಣವಾಗಿದ್ದ ಎಂಬ ಆರೋಪ ಈತನ ಮೇಲಿತ್ತು ಎನ್ನಲಾಗಿದೆ. ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಎನ್‍ಐಎ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News