ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ: ಶಾಸಕ ಗೂಳಿಹಟ್ಟಿ ಶೇಖರ್

Update: 2021-09-21 18:07 GMT

ಬೆಂಗಳೂರು, ಸೆ. 21: `ನಾನು ಯಾವುದೇ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುವ ಮಾತೇ ಇಲ್ಲ. ಜೊತೆಗೆ ಬಿಜೆಪಿ ತ್ಯಜಿಸುವ ಪ್ರಶ್ನೆಯೇ ಇಲ್ಲ' ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ವಿಧಾನಸಭೆಯಲ್ಲಿಂದು ಸ್ಪಷ್ಟಣೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಸಾಮಾಜಿಕ ಜಾಲತಾಣಗಳ ಉಲ್ಲೇಖಿಸಿ, ನನ್ನ ವಿರುದ್ಧ ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಆದರೆ, ನನ್ನ ರಾಜಕೀಯ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆಂಬುದು ಶುದ್ಧ ಸುಳ್ಳು. ಹೀಗೆ ಸುದ್ದಿ ಹಬ್ಬಿಸುತ್ತಿರುವ ಕಾರಣ ನಮ್ಮದೆ ಸರಕಾರದಲ್ಲಿಯೂ ನಮ್ಮ ಕ್ಷೇತ್ರಗಳಿಗೆ ಸರಿಯಾದ ರೀತಿಯಲ್ಲಿ ಅನುದಾನ ದೊರೆಯುತ್ತಿಲ್ಲ. ಆದುದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕು ಎಂದು ಗೂಳಿಹಟ್ಟಿ ಶೇಖರ್ ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News