ರಸ್ತೆ ಅಭಿವೃದ್ಧಿಗೆ 6.26 ಕೋಟಿ ರೂ.ಮಂಜೂರು: ಬಸವರಾಜ ಬೊಮ್ಮಾಯಿ

Update: 2021-09-21 18:27 GMT

ಬೆಂಗಳೂರು, ಸೆ. 21: ಬೆಂಗಳೂರು ಬೃಹತ್ ನಗರ ಪಾಲಿಕೆಯ ವಾರ್ಡ್ ಸಂಖ್ಯೆ-191 ವ್ಯಾಪ್ತಿಗೆ ಒಳಪಡುವ ಕೂಡ್ಲು ಪ್ರದೇಶದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ 2.26ಕೋಟಿ ರೂ. ಮಂಜೂರಾಗಿದ್ದು, 1.26 ಕೋಟಿ ರೂ.ವೆಚ್ಚದ ಕಾಮಗಾರಿ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಬಿ.ಶಿವಣ್ಣ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯವರು 110 ಹಳ್ಳಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಗುಂಡಿಗಳನ್ನು ಅಗೆದಿದ್ದು, ಇದರ ದುರಸ್ತಿ ಹಾಗೂ ಅಭಿವೃದ್ಧಿಗಾಗಿ 2.90 ಕೋಟಿ ರೂ.ಮಂಜೂರಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News