ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-09-21 18:28 GMT

ಬೆಂಗಳೂರು, ಸೆ. 21: ಬೆಂಗಳೂರು-ಬನ್ನೇರುಘಟ್ಟ ರಸ್ತೆ, ಬೇಗೂರು ರಸ್ತೆ ಮತ್ತು ಸರ್ಜಾಪುರ ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಸತೀಶ್ ರೆಡ್ಡಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಖಾಸಗಿ ಭೂ ಮಾಲಕರು ಟಿಡಿಆರ್ ಯೋಜನೆಗೆ ಆಸಕ್ತಿಯನ್ನು ತೋರಿಸದ ಕಾರಣ ಹಾಗೂ ಕೆಲವೊಂದು ಮಾಲಕರು ನ್ಯಾಯಾಲಯದಲ್ಲಿ ದಾವೆ ಹೂಡಿರುವುದರಿಂದ ರಸ್ತೆ ಅಗಲೀಕರಣ ವಿಳಂಬವಾಗಿದೆ ಎಂದರು.

ಟಿಡಿಆರ್ ನಿಯಮಗಳನ್ನು ಸರಳೀಕರಣಗೊಳಿಸಿ, ಮತ್ತೊಮ್ಮೆ ಭೂ ಮಾಲಕರ ಮನವೊಲಿಸಿ ಟಿಡಿಆರ್ ಮೂಲಕ ಭೂಸ್ವಾಧೀನಕ್ಕೆ ಪ್ರಯತ್ನಿಸಿ ರಸ್ತೆಗಳ ಅಗಲೀಕರಣ ಕಾಮಗಾರಿಗಳನ್ನು ಅತಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News