ಕೊಪ್ಪಳ; ದಲಿತ ಬಾಲಕ ದೇವಾಲಯ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿದ ಪ್ರಕರಣ: ಐವರು ಆರೋಪಿಗಳ ಬಂಧನ

Update: 2021-09-22 07:32 GMT

ಕೊಪ್ಪಳ (ಕುಷ್ಟಗಿ): ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಬಾಲಕನೋರ್ವ ದೇವಸ್ಥಾನ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ದಂಡ ವಿಧಿಸಿ ದೇವಸ್ಥಾನ ಶುದ್ಧೀಕರಿಸಿರುವ ಘಟನೆ ವಿರೋಧಿಸಿ ದಲಿತ ಪರ ಸಂಘಟನೆಗಳು ದೂರು ನೀಡಿದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.

ಏನೂ ಅರಿಯದ ಎರಡು ವರ್ಷದ ಮಗುವೊಂದು ದೇವಾಲಯ ಪ್ರವೇಶಿಸಿದ್ದು, ಇದಕ್ಕಾಗಿ ಮಗುವಿನ ಹೆತ್ತವರಿಗೆ ದಂಡ ಹಾಗೂ ದೇವಸ್ಥಾನದಲ್ಲಿ ಕೈಗೊಳ್ಳಬೇಕಿರುವ ಶುದ್ಧಿ ಕಾರ್ಯಗಳಿಗೆ ತಗಲುವ ವೆಚ್ಚ ನೀಡುವಂತೆ ದೇವಸ್ಥಾನದ ಕೆಲವು ಮುಖಂಡರು ಷರತ್ತು ವಿಧಿಸಿ ಅಮಾನವೀಯತೆ ಮೆರೆದಿದ್ದಾರೆ ಎಂದು ಎಂದು ದಲಿತ ಪರ ಸಂಘಟನೆಗಳು ದೂರಿವೆ.

''ಇಂತಹ ಅಸ್ಪೃಶ್ಯತೆ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧ ಕೃತ್ಯವಾಗಿದ್ದು, ಜಿಲ್ಲೆಯಲ್ಲಿ ಇಂತಹ ಅನಿಷ್ಠ ಆಚರಣೆಗಳನ್ನು ಮಾಡುವುದು ತಿಳಿದು ಬಂದಲ್ಲಿ ಅಂತವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ತಿಳಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News