ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಶಿವಮೊಗ್ಗ ಮೂಲದ ಮೂವರು ವಿದ್ಯಾರ್ಥಿಗಳ ರಕ್ಷಣೆ

Update: 2021-09-22 11:52 GMT

ಉಡುಪಿ, ಸೆ.22: ಮಲ್ಪೆ ಬೀಚ್‌ನ ಸಮುದ್ರದಲ್ಲಿ ಆಡುತ್ತಿದ್ದ ವೇಳೆ ನೀರು ಪಾಲಾಗುತ್ತಿದ್ದ ಶಿವಮೊಗ್ಗ ಮೂಲದ ಮೂವರು ವಿದ್ಯಾರ್ಥಿಗಳನ್ನು ಮಲ್ಪೆ ಬೀಚ್ ಜೀವರಕ್ಷಕ ದಳ ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ 2ಗಂಟೆ ಸುಮಾರಿಗೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್(19) ಮತ್ತು ಮಂಜುನಾಥ್(19), ತರೀಕೆರೆ ನಿವಾಸಿ ಕಿರಣ್(19) ಅಪಾಯದಿಂದ ಪಾರಾದ ವಿದ್ಯಾರ್ಥಿಗಳು. ಶಿವಮೊಗ್ಗ ಕಾಲೇಜಿನ ಸುಮಾರು 35 ವಿದ್ಯಾರ್ಥಿಗಳು ಬಸ್ಸಿನಲ್ಲಿ ಮಲ್ಪೆ ಬೀಚ್‌ಗೆ ಮಧ್ಯಾಹ್ನ 12.30ರ ಸುಮಾರಿಗೆ ಪ್ರವಾಸ ಬಂದಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳು ಸಮದ್ರದ ನೀರಿನಲ್ಲಿ ಆಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಅಲೆಗಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದರೆನ್ನಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಮಲ್ಪೆ ಬೀಚ್ ಜೀವ ರಕ್ಷಕ ದಳ ಸಿಬ್ಬಂದಿ ಮಧುಕರ್ ಸಾಲ್ಯಾನ್ ಹಾಗೂ ವಾಟರ್ ಸ್ಪೋರ್ಟ್ಸ್‌ನವರು ನೀರಿನಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News