ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂ. ಪರಿಹಾರ: ಸುಪ್ರೀಂಕೋರ್ಟ್ ಗೆ ತಿಳಿಸಿದ ಕೇಂದ್ರ

Update: 2021-09-22 12:33 GMT

ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರ ಕುಟುಂಬಗಳು 50,000 ರೂ. ಪರಿಹಾರ ಪಡೆಯುತ್ತವೆ ಎಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.

ಈಗಾಗಲೇ ಸಂಭವಿಸಿದ ಕೋವಿಡ್ ಸಾವುಗಳಿಗೆ ಮಾತ್ರವಲ್ಲದೆ ಮುಂದೆಯೂ ಕೂಡ ಇದೇ  ರೀತಿಯ ಸಾವುಗಳಿಗೆ ಪರಿಹಾರವನ್ನು ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಪರಿಹಾರ ಮೊತ್ತವನ್ನು ರಾಜ್ಯ ಸರಕಾರಗಳು ಆಯಾ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಪಾವತಿಸುತ್ತವೆ. ಅವುಗಳನ್ನು  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಥವಾ ಜಿಲ್ಲಾಡಳಿತಗಳ ಮೂಲಕ ನೀಡಲಾಗುವುದು ಎಂದು ಸರಕಾರ ಬುಧವಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News