ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರಿಗೆ ಮಾಸಾಶನಕ್ಕಾಗಿ ಅರ್ಜಿಗಳ ಆಹ್ವಾನ

Update: 2021-09-22 16:43 GMT

ಉಡುಪಿ, ಸೆ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ದೈವಾರಾದನೆ, ಜಾನಪದ, ಯಕ್ಷಗಾನ, ಲಲಿತಕಲೆ ಮತ್ತು ಶಿಲ್ಪಕಲೆ ಕ್ಷೇತ್ರದಲ್ಲಿ 25 ವರ್ಷಗಳ ಕಾಲ ಗಣನೀಯವಾಗಿ ಸೇವೆ ಸಲ್ಲಿಸಿದ ಆಸಕ್ತ ಸಾಹಿತಿ- ಕಲಾವಿದರಿಗೆ ಆರ್ಥಿಕ ನೆರವು ನೀಡಲು ಅರ್ಜಿಗಳನ್ನು ಅಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು ಕನಿಷ್ಟ 58 ವರ್ಷ ವಯೋಮಾನದವರಾಗಿರಬೇಕು. ಅಂಗವಿಕಲರಾಗಿದ್ದಲ್ಲಿ 40 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ವಾರ್ಷಿಕ ಆದಾಯ ಒಂದು ಲಕ್ಷ ರೂ ಮೀರಿರದೆ, 20 ವರ್ಷ ಕಲಾ ಸೇವೆ ಮಾಡಿರಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168 ಅಥವಾ ಇಮೇಲ್: dkc.udupi@gmail.com-ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News