ಮಂಗಳೂರು: ನಿವೃತ್ತ ನ್ಯಾಯಾಧೀಶ ಸಿ.ಬಿ.ಆರ್.ಐ ನಝರೆತ್ ನಿಧನ

Update: 2021-09-22 17:56 GMT

ಮಂಗಳೂರು, ಸೆ.22: ಮಂಗಳೂರು ಕದ್ರಿ ನಿವಾಸಿ ನಿವೃತ್ತ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಕ್ಲಾಡ್ ಬನವೆಂಚರ್ ರೇಮಂಡ್ ಇಗ್ನೀಷಿಯಸ್ ನಝರೆತ್ (ಸಿ.ಬಿ.ಆರ್.ಐ ನಝರೆತ್) (89) ನಿಧನರಾದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಸಂತ ಅಲೋಷಿಯಸ್‌ನಲ್ಲಿ ವಿಜ್ಞಾನ ಪದವಿ ಪಡೆದ ಬಳಿಕ ಮದ್ರಾಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಬಳಿಕ ನ್ಯಾಯವಾದಿಯಾಗಿ ವೃತ್ತಿ ಆರಂಭಿಸಿದ್ದರು. 1966ರಲ್ಲಿ ನ್ಯಾಯಾಧೀಶರಾಗಿ ನ್ಯಾಯಾಂಗ ಸೇವೆ ಆರಂಭಿಸಿದ ಅವರು, ಕಾರವಾರ, ಕುಮಟಾ, ದಕ್ಷಿಣ ಕನ್ನಡ, ಬೆಂಗಳೂರು, ಭದ್ರಾವತಿ, ಚಿತ್ರದುರ್ಗದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಗುಲ್ಬರ್ಗಾದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾಗಿ ನಿವೃತ್ತರಾದರು.

ನಿವೃತ್ತಿಯ ಬಳಿಕ ಗುಲ್ಬರ್ಗಾ, ಬೀದರ್, ಬಳ್ಳಾರಿ, ರಾಯಚೂರು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕನ್ಶೂಮರ್ ಫಾರಂನ ಅಧ್ಯಕರಾಗಿ ಸೇವೆ ಸಲ್ಲಿಸಿದ್ದರು. ಕ್ರೀಡಾಪಟುವಾಗಿದ್ದ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News