ಎಸ್ಸೆಸ್ಸೆಫ್ ದ.ಕ. ವೆಸ್ಟ್ ಜಿಲ್ಲೆ ವತಿಯಿಂದ ಪ್ರತಿಭೋತ್ಸವ ಕಾರ್ಯಾಗಾರ

Update: 2021-09-23 04:51 GMT

ಮಂಗಳೂರು, ಸೆ.23: ಕರ್ನಾಟಕ ರಾಜ್ಯ  ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(ಎಸ್ಸೆಸ್ಸೆಫ್) ಅಧೀನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪ್ರತಿಭೋತ್ಸವದ ಅಂಗವಾಗಿ, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ವತಿಯಿಂದ  ಬುಧವಾರ ರಾತ್ರಿ ಜಿಲ್ಲಾ ಮಟ್ಟದ ಪ್ರತಿಭೋತ್ಸವ ಕಾರ್ಯಾಗಾರ ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಮುನೀರ್ ಸಖಾಫಿ ಉಳ್ಳಾಲ‌ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸುನ್ನೀ ಜಂಇಯ್ಯತುಲ್ ಉಲಮಾ  ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಫೈನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾ ಪ್ರತಿಭೋತ್ಸವ ಸಮಿತಿಯ ಅಧ್ಯಕ್ಷ ನವಾಝ್ ಸಖಾಫಿ ಅಡ್ಯಾರ್ ಪದವು ವಿಷಯ ಮಂಡಿಸಿ ಪ್ರತಿಭೋತ್ಸವ ಕೈಪಿಡಿಯನ್ನು ಡಿವಿಷನ್ ಸಮಿತಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಲಿ 4 ನೇ ಬ್ಲಾಕ್ ಕಾಟಿಪಳ್ಳ ಹಾಗೂ ವಿಸ್ಡಂ ಕಾರ್ಯದರ್ಶಿ ಸುಹೈಲ್ 10ನೇ ಮೈಲ್ ಉಪಸ್ಥಿತರಿದ್ದರು.

ಜಿಲ್ಲಾ ಪ್ರತಿಭೋತ್ಸವ ಸಮಿತಿಯ ಕನ್ವೀನರ್ ನೌಫಾಲ್ ಫರೀದ್‌ ನಗರ ಸ್ವಾಗತಿಸಿದರು. ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News