ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಭಾಷಣ ಸ್ಪರ್ಧೆ: ಮನ್ನಾರ್ ಮನ್ನಾನ್

Update: 2021-09-23 08:07 GMT

ಮಂಗಳೂರು, ಸೆ.23: ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ಯಂಗ್ ಇಂಡಿಯಾ ಕೆ ಬೋಲ್ (ಯುವ ಭಾರತದ ಧ್ವನಿ) ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ರಾಜ್ಯ ಯುವ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಮನ್ನಾರ್ ಮನ್ನಾನ್ ಹೇಳಿದ್ದಾರೆ. ಗುರುವಾರ ನಗರದ ಕಾಂಗ್ರೆಸ್  ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಬಿಜೆಪಿ ‌ನೇತೃತ್ವದ ಸರಕಾರ ಬಂದ ಬಳಿಕ ಜನತೆ ಬೇಸತ್ತಿದೆ. ನಿರುದ್ಯೋಗ ತಾಂಡವಾಡುತ್ತಿದೆ. ಹಿಂದುತ್ವದ ಹೆಸರಿನಲ್ಲಿ ಯುವ ಜನರನ್ನು ದಿಕ್ಜು ತಪ್ಪಿಸುತ್ತಿದೆ. ಈ ನಿಟ್ಟಿನಲ್ಲಿ ಯುವ ಜನರ ಧ್ವನಿಯನ್ನು ರಾಷ್ಟ್ರ ಮಟ್ಟದಲ್ಲಿ ಬಿಂಬಿಸುವ ಸಲುವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ಐದು ವಿಷಯಗಳಲ್ಲಿ ಕನ್ನಡ, ಹಿಂದಿ, ಇಂಗ್ಲಿಷ್ ಹೀಗೆ ಮೂರು ಭಾಷೆಗಳಲ್ಲಿ ಎರಡು ನಿಮಿಷದ ಭಾಷಣ ಸ್ಪರ್ಧೆ ನಡೆಸಲಾಗುವುದು. ‌ಮೊದಲು ಹಂತದಲ್ಲಿ ಜಿಲ್ಲಾ ಮಟ್ಟದ, ದ್ವಿತೀಯ ಹಂತದಲ್ಲಿ ರಾಜ್ಯ ಮಟ್ಟದ, ಮೂರನೆ ಹಂತದಲ್ಲಿ ರಾಷ್ಟ್ರ ಮಟ್ಟದ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

18ರಿಂದ 35 ವರ್ಷದೊಳಗೆ ಆಸಕ್ತರು ಆನ್‌ಲೈನ್ ಮೂಲಕ ನೋಂದಣಿ ಮಾಡಿ ಗೂಗಲ್ ಫಾರ್ಮ್ (ಗೂಗಲ್ ಲಿಂಕ್‌ಗಾಗಿ  ಮೊ.ಸಂ: 9945145149/ 8088451135 ಸಂಪರ್ಕಿಸಬಹುದು) ತುಂಬಿಸಿ ಕಳುಹಿಸಬೇಕು‌. ಜಿಲ್ಲಾ ಮಟ್ಟದಿಂದ 5 ಮಂದಿ ವಿಜೇತರನ್ನು, ರಾಜ್ಯ ಮಟ್ಟದಿಂದ 10 ಮಂದಿ ವಿಜೇತರನ್ನು ಆಯ್ಕೆ ಮಾಡಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಕಳಿಸಲಾಗುವುದು‌. ಅಕ್ಟೋಬರ್ 15 ನೋಂದಣಿಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 18ರಂದು ಸ್ಪರ್ಧೆ ನಡೆಸಲಾಗುವುದು. ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಹುಟ್ಟುಹಬ್ಬದ ದಿನವಾದ ನವೆಂಬರ್ 14ರಂದು ರಾಷ್ಟ್ರ ಮಟ್ಟದ ಸ್ಪರ್ಧೆಯನ್ನು ಹೊಸದಿಲ್ಲಿಯಲ್ಲಿ ಆಯೋಜಿಸಲಾಗುವುದು‌. ಈ ಸ್ಪರ್ಧೆಯ ಮೂಲಕ ಐವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಲಾಗುವುದು ಎಂದು‌ ಮನ್ನಾರ್ ಮನ್ನಾನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ದೀಪಿಕಾ ರೆಡ್ಡಿ, ಮೇರಿಲ್ ರೇಗೋ, ಗಿರೀಶ್ ಅಳ್ವಾ, ಅಭಿಷೇಕ್ ಬೆಳ್ಳಿಪ್ಪಾಡಿ, ನವೀದ್ ಅಖ್ತರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News