ಮಂಗಳೂರು: ಲಾಡ್ಜ್ನಲ್ಲಿ ಬಂಟ್ವಾಳ ಮೂಲದ ಯುವಕನ ಮೃತದೇಹ ಪತ್ತೆ
Update: 2021-09-23 11:34 GMT
ಮಂಗಳೂರು, ಸೆ.23: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಲಾಡ್ಜ್ವೊಂದರಲ್ಲಿ ಬಂಟ್ವಾಳ ಮೂಲದ ಯುವಕನ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಬಂಟ್ವಾಳ ಮೂಲದ ಗುರುಪ್ರಸಾದ್ ಎಂದು ಗುರುತಿಸಲಾಗಿದೆ.
ಮೂರು ದಿನಗಳಾದರೂ ಕೊಠಡಿಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಸಿಬ್ಬಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಗುರುಪ್ರಸಾದ್ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.