ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಟಾಂಗಾ ಜಾಥಾ

Update: 2021-09-24 06:36 GMT

ಬೆಂಗಳೂರು, ಸೆ.24: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯನ್ನು ಮುಂದುವರಿಸಿರುವ ಕಾಂಗ್ರೆಸ್ ಪಕ್ಷ, ಇಂದು ವಿಧಾನ ಸೌಧದತ್ತ ಟಾಂಗಾ ಜಾಥಾ ನಡೆಸಿದೆ.

ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿಯಿಂದ ಟಾಂಗಾ ಜಾಥಾಕ್ಕೆ ಚಾಲನೆ ನೀಡಲಾಗಿದೆ. ವಿಧಾನ ಸೌಧದ ವರೆಗೆ ಸಾಗುವ ಜಾಥಾಕ್ಕೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ನೇತೃತ್ವ ವಹಿಸಿದ್ದು, ಇಬ್ಬರೂ ಒಂದೇ ಟಾಂಗಾವನ್ನೇರಿ ಸವಾರಿ ಹೊರಟಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನರು ಜಾಥಾದಲ್ಲಿ ಪಾಲ್ಗೊಂಡಿದ್ದು, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಜಾಥಾದಲ್ಲಿ ಭಾಗವಹಿಸಿದ್ದಾರೆ.

ಪ್ರಸಕ್ತ ವಿಧಾನ ಮಂಡಲ ಅಧಿವೇಶನದ ಅವಧಿಯಲ್ಲಿ ಡೀಸೆಲ್, ಪೆಟ್ರೋಲ್ ಸೇರಿದಂತೆ ದಿನಬಳಕೆಯ ಸಾಮಗ್ರಿಗಳ ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಎತ್ತಿನಗಾಡಿ ಜಾಥಾ, ಸೈಕಲ್ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಮುಂದುವರಿದ ಭಾಗವಾಗಿ ಇಂದು ಟಾಂಗಾ ಜಾಥಾ ನಡೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News