ಉಡುಪಿ: ಸೆ.28ರಂದು ಉಚಿತ ನೇತ್ರ ತಪಾಸಣೆ -ಚಿಕಿತ್ಸಾ ಶಿಬಿರ

Update: 2021-09-24 16:23 GMT

ಉಡುಪಿ, ಸೆ.24: ಕಡಂದಲೆ ಸುರೇಶ್ ಭಂಡಾರಿ ಫ್ಯಾಮಿಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಸೆ.28ರ ಬೆಳಗ್ಗೆ 9ಗಂಟೆಗೆ ಬಾರ್ಕೂರಿನ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ, ಕಾರ್ಯಕ್ರಮವನ್ನು ಶಾಕಸ ಕೆ.ರಘುಪತಿ ಭಟ್ ಉದ್ಘಾಟಿಸಲಿರುವರು. ಸಂಜೆ 4ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆರೆಸ್ಸೆಸ್ ಪ್ರಮುಖ ಪ್ರಭಾಕರ್ ಭಟ್ ಕಲ್ಲಡ್ಕ ಭಾಗವಹಿಸಲಿರುವರು. ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಆಯ್ಕೆಯಾದವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಅಗತ್ಯವಿದ್ದವರಿಗೆ ಕನ್ನಡಕ ವಿತರಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಶ್ವನಾಥ ಭಂಡಾರಿ, ಸಹ ಕೋಶಾಧಿಕಾರಿ ವಾರಿಜಾ ವಾಸುದೇವ ಭಂಡಾರಿ, ಭಂಡಾರಿ ಮಹಾಮಂಡಳ ಪ್ರಧಾನ ಕಾರ್ಯದರ್ಶಿ ಯು.ಸತೀಶ್ ಭಂಡಾರಿ, ಕಚ್ಚೂರು ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಭಂಡಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News