ಕಾರ್ಕಳ: ಸೆ.25ರಂದು ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್‌ ಪಂಜಿನ ಮೆರವಣಿಗೆ

Update: 2021-09-24 17:12 GMT

ಕಾರ್ಕಳ: ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್, ಕಾರ್ಕಳ ನಗರ ಕಾಂಗ್ರೆಸ್ ಸಹಯೋಗದಲ್ಲಿ ಸೆಪ್ಟೆಂಬರ್ 25ರಂದು ಸಂಜೆ 6.00 ಗಂಟೆಗೆ ಕಾರ್ಕಳ ಅನಂತಶಯನ ದೇವಸ್ಥಾನದಿಂದ ವೆಂಕಟರಮಣ ದೇವಸ್ಥಾನದವರೆಗೆ ಬೃಹತ್ ಪಂಜಿನ ಮೆರವಣಿಗೆಯು ನಡೆಯಲಿದೆ. ನಂತರ ನಡೆಯುವ ಬೃಹತ್ ಜನಜಾಗೃತಿ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಸುಧೀರ್ ಕುಮಾರ್ ಮುರೋಳಿಯವರು ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಕಾರ್ಕಳ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಲಾಡಿ ತಿಳಿಸಿದರು

ಹಿಂದು ಧರ್ಮ, ಧಾರ್ಮಿಕ ಭಾವನೆಗಳ ವಿಚಾರದಲ್ಲಿ ರಾಜಕೀಯ ಮಾಡುವ ಬಿಜೆಪಿಯು ದೇವಸ್ಥಾನ ಧ್ವಂಸದ ವಿಚಾರದಲ್ಲಿ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ತಾನು ನುಣುಚಿಕೊಳ್ಳುವ ಯತ್ನವನ್ನು ಮಾಡುತ್ತಿದೆ. ಇದನ್ನು ಖಂಡಿಸಿ ಈ ಬಗ್ಗೆ ಜನರಿಗೆ ಸತ್ಯ ಸಂಗತಿಯನ್ನು ತಿಳಿಸಲು ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಸಭೆಯಲ್ಲಿ ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ನಾಯಕರುಗಳು ಭಾಗಹವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಕಾರ್ಕಳದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News