ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

Update: 2021-09-25 11:50 GMT
ಫೈಲ್ ಚಿತ್ರ

ಬೆಂಗಳೂರು, ಸೆ.24: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಸೆ.27ರಂದು ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ವಕ್ಫ್ ಬೋರ್ಡ್‍ನಲ್ಲಿ ಮೊದಲಿಗೆ ಖಾಲಿಯಿರುವ ಸದಸ್ಯರ ಹುದ್ದೆಗೆ(ಮುತವಲ್ಲಿ ಕೋಟಾ) ಚುನಾವಣೆ ನಡೆಸಿ, ಮಂಡಳಿಯನ್ನು ಮರು ರಚಿಸಿ ತದನಂತರ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಸಬೇಕಾಗಿದೆ. ಆದುದರಿಂದ, ಸೆ.27ರಂದು ಅಧ್ಯಕ್ಷರ ಹುದ್ದೆಗೆ ನಿಗದಿಯಾಗಿರುವ ಚುನಾವಣೆಯನ್ನು ಮುಂದೂಡುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News