ಸ್ವಸಹಾಯ ಕಿರು ಉದ್ದಿಮೆ ಯೋಜನೆಯ ನೆರವು

Update: 2021-09-25 12:15 GMT

ಉಡುಪಿ, ಸೆ.25: ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವ-ಸಹಾಯ ಗುಂಪುಗಳನ್ನು ಕಿರು ಉದ್ದಿಮೆ ಸಂಸ್ಥೆಗಳನ್ನಾಗಿ ರೂಪಿಸಲು ತಲಾ 1 ಲಕ್ಷ ರೂ.ನಂತೆ ಬೀಜಧನ ಒದಗಿಸಲಾಗುತ್ತಿದೆ. ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಸ್ವ-ಸಹಾಯ ಗುಂಪುಗಳು 10 ವರ್ಷಗಳಿಂದ ಆದಾಯೋತ್ಪನ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಹಾಗೂ ಎನ್.ಆರ್.ಎಲ್.ಎಮ್ ಅಡಿಯಲ್ಲಿ ಬರುವಂತಹ ಗ್ರಾಪಂ ಮಟ್ಟದ ಫೆಡರೇಶನ್‌ನಲ್ಲಿ ಕಡ್ದಾಯವಾಗಿ ಸದಸ್ಯರಾಗಿರಬೇಕು.

ಸಮುದಾಯ ಬಂಡವಾಳ ನಿಧಿ ಪಡೆದುಕೊಳ್ಳವುದರ ಜೊತೆಗೆ ಕಳೆದ 5 ವರ್ಷಗಳಿಂದ ಬ್ಯಾಂಕ್‌ಗಳಿಂದ ಸಾಲ ಪಡೆದಿರಬೇಕು ಹಾಗೂ ಸುಸ್ಥಿದಾರ ರಾಗಿರದೇ ಸಾಲ ಮರುಪಾವತಿಸಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ದಿ ಯೋಜನಾ ಕಚೇರಿ ದೂರವಾಣಿ ಸಂಖ್ಯೆ: (ಉಡುಪಿ-0820-2524055), (ಕುಂದಾಪುರ-08254-230807), (ಕಾರ್ಕಳ-08258-230992), (ಬ್ರಹ್ಮಾವರ- 0820-2562244)ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News