ಸೆ.27ರ ಬಂದ್‌ಗೆ ಬೆಂಬಲ

Update: 2021-09-25 13:48 GMT

ಮಂಗಳೂರು, ಸೆ. 25: ಕೃಷಿ ಮಸೂದೆ ವಾಪಸ್‌ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸೆ.27ರಂದು ನಡೆಯುವ ಭಾರತ್ ಬಂದ್‌ಗೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ಅಂದು ಬಿಸಿ ರೋಡಲ್ಲಿ ನಡೆಯಲಿರುವ ಪ್ರತಿಭಟನೆ ಹಾಗು ಹೆದ್ದಾರಿ ಬಂದ್‌ಗೆ ಸಿಪಿಐ ದ.ಕ.ಜಿಲ್ಲಾ ಸಮಿತಿಯು ಪೂರ್ಣ ಬೆಂಬಲ ನೀಡಿದೆ. ಪಕ್ಷದ ಕಾರ್ಯಕರ್ತರು ಇದರಲ್ಲಿ ಭಾಗವಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಮನವಿ ಮಾಡಿದೆ.

ಎಐಟಿಯುಸಿ ಬೆಂಬಲ

ದೇಶದ ಎಲ್ಲಾ ರೈತ ಸಂಘಟನೆಗಳು ಕೃಷಿ ಮಸೂದೆಗಳ ವಾಪಸಾತಿ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ನಡೆಯುವ ಭಾರತ ಬಂದ್ ಯಶಸ್ವಿಗೊಳಿಸಬೇಕು ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್(ಎಐಟಿಯುಸಿ) ಜಿಲ್ಲಾ ಕಾರ್ಯದರ್ಶಿ ಎಚ್‌ವಿ ರಾವ್ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News