ಯಾಕೂಬ್ ಹಾಜಿ ದರ್ಬೆ ನಿಧನ

Update: 2021-09-26 10:37 GMT

ಪುತ್ತೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ, ಪುತ್ತೂರು ನಗರ ಹೊರವಲಯದ ಕೂರ್ನಡ್ಕ ಮರೀಲ್ ನಿವಾಸಿ ಯಾಕೂಬ್ ಹಾಜಿ ದರ್ಬೆ(70) ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಯಾಕೂಬ್ ಹಾಜಿ ಅವರು ಪುತ್ತೂರು ಅನ್ಸಾರುದ್ದಿನ್ ಜಮಾಅತ್ ಕಮಿಟಿಯ ಮಾಜಿ ಉಪಾಧ್ಯಕ್ಷರಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ದ.ಕ.ಜಿಲ್ಲಾ ವಕ್ಫ್ ಬೋರ್ಡ್‍ನ ಮಾಜಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪತ್ರಿಯರು, ಬಂದು ಬಳಗವನ್ನು ಅಗಲಿದ್ದಾರೆ.

ಸಂತಾಪ

ಯಾಕೂಬ್ ಹಾಜಿ ಅವರ ನಿಧನಕ್ಕೆ ಕುಂಬ್ರ ಕೆಐಸಿ ಸಂಸ್ಥೆಯ ಸಂಚಾಲಕ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್, ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News