ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ

Update: 2021-09-26 12:02 GMT

ಉಡುಪಿ, ಸೆ.26: ಕೃಷಿ ಕಾಯಿದೆ ತಿದ್ದುಪಡಿ ಮಸೂದೆಯ ಮೂಲಕ ದೇಶದ ಬೆನ್ನೆಲುಬಾಗಿರುವ ರೈತರ ಬೆನ್ನುಮೂಳೆ ಮುರಿಯುವ ಕೇಂದ್ರದ ಧಮನಕಾರಿ ನಿಲುವು ಅಸಾಂವಿಧಾನಿಕವಾಗಿದ್ದು ಇದರ ವಿರುದ್ಧ ಸೆ.27ರಂದು ನಡೆಯುವ ರೈತ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.

ರೈತ ಸಂಘಟನೆಗಳು ಕರೆಕೊಟ್ಟ ಭಾರತ ಬಂದ್ ಮುಷ್ಕರ ಕಾರ್ಯಕ್ರಮವನ್ನು ಒಂದು ರಾಷ್ಟ್ರೀಯ ಆಂದೋಲನವನ್ನಾಗಿಸಿ ಯಶಸ್ವಿಗೊಳಿಸಿ ಕೇಂದ್ರ ಸರಕಾರ ವನ್ನು ಎಚ್ಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸೋಮವಾರದ ಭಾರತ್ ಬಂದ್ ಕಾರ್ಯಕ್ರಮದಲ್ಲಿ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರೈತ ಪರ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊವೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News