ಜನಪರ ಬಂದ್‍ಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

Update: 2021-09-26 14:02 GMT

ಬೆಂಗಳೂರು, ಸೆ. 26: ‘ಜನಪರ, ರೈತ ಮತ್ತು ಶ್ರಮಿಕರ ಪರವಾದ ಯಾವುದೇ ಪ್ರತಿಭಟನೆ ಮತ್ತು ಬಂದ್‍ಗೆ ಜೆಡಿಎಸ್ ಬೆಂಬಲ ಸದಾ ಇರುತ್ತದೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜನಹಿತದಲ್ಲಿ ನಂಬಿಕೆ ಇಟ್ಟು ನಮ್ಮ ಪಕ್ಷ ಕೆಲಸ ಮಾಡುತ್ತದೆ. ಅವರ ಹಿತಕ್ಕೆ ಧಕ್ಕೆ ಎದುರಾದರೆ ಎಲ್ಲ ವೇದಿಕೆಗಳಲ್ಲೂ ದನಿ ಎತ್ತುತ್ತದೆ. ಇದರಲ್ಲಿ ಯಾವುದೇ ಮುಲಾಜಿಲ್ಲ' ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ದ ನಾಳೆ(ಸೆ.27) ರೈತರು ಕರೆ ನೀಡಿರುವ ಬಂದ್ ಶಾಂತಿಯುತವಾಗಿ ನಡೆಯಲಿ ಹಾಗೂ ರೈತರು, ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳ ಬಗ್ಗೆ ಸರಕಾರಗಳ ಗಮನ ಸೆಳೆಯಲಿ' ಎಂದು ಕುಮಾರಸ್ವಾಮಿ ಇದೇ ವೇಳೆ ಆಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News