ಶಿವಮೊಗ್ಗ; ಯುವಕನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ
Update: 2021-09-26 15:54 GMT
ಶಿವಮೊಗ್ಗ(ಸೆ.26): ಸಯ್ಯದ್ ಸಾದೀಕ್ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಇಲಿಯಾಸ್ ನಗರ ನಿವಾಸಿ ಸಯ್ಯದ್ ಸಾಧಿಕ್(38) ಎಂಬುವವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ತುಂಗಾನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅವರಿಂದ ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ: ಕೈ ಸಾಲವಾಗಿ ಹಣವನ್ನು ನೀಡಿದ್ದು, ವಾಪಾಸ್ ನೀಡದೆ ಒಂದು ವರ್ಷದಿಂದ ಹಿಂತುಗಿಸಿರಲಿಲ್ಲ. ಹಣ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಸೆ.24ರಂದು ಕಲ್ಲೂರು ಇಂಡಸ್ಟ್ರೀಯಲ್ ಏರಿಯಾ ಶಾರದಾ ಕಾಲೊನಿ ಚಾನೆಲ್ ಹತ್ತಿರ ಹಣ ನೀಡುವುದಾಗಿ ಹೇಳಿ ಕರೆಸಿಕೊಂಡಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.