ಬೈಕ್‍ನಲ್ಲಿ ಬಂದು ಮೊಬೈಲ್ ಕಿತ್ತುಕೊಂಡು ಪರಾರಿ; ಆರೋಪಿಗಳ ಸೆರೆ

Update: 2021-09-26 15:57 GMT

ಶಿವಮೊಗ್ಗ(ಸೆ.26): ನಗರದ ಮೇದಾರಕೇರಿ ಹತ್ತಿರ ಬೈಕ್‍ನಲ್ಲಿ ಬಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಶನಿವಾರ ಸಂಜೆ ಪಿ ಆಂಡ್ ಟಿ ಕಾಲೊನಿಯ ನಿವಾಸಿಗಳು ಹೋಂಡಾ ಆಕ್ಟಿವಾ ಬೈಕ್‍ನಲ್ಲಿ ತನ್ನ ಪತ್ನಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಎದುರುಗಡೆ ಬಂದು ಬೈಕ್‍ಗೆ ಡಿಕ್ಕಿ ಹೊಡೆಸಿದ್ದಾರೆ. ನಂತರ, ಚಾಕು ತೋರಿಸಿ ಮೊಬೈಲ್ ಕಿತ್ತುಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ವಿನೋಬನಗರ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 1 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದು, ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News