ರಾಜ್ಯದಲ್ಲಿ ರವಿವಾರ 775 ಮಂದಿಗೆ ಕೊರೋನ ದೃಢ, 9 ಮಂದಿ ಮೃತ್ಯು

Update: 2021-09-26 16:13 GMT

ಬೆಂಗಳೂರು, ಸೆ.26: ರಾಜ್ಯದಲ್ಲಿ ರವಿವಾರ 775 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 9 ಜನರು ಸೋಂಕಿಗೆ ಬಲಿಯಾಗಿದ್ದು, 860 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,73,395ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,726ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 13,213ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

9 ಸೋಂಕಿತರು ಬಲಿ: ಬೆಳಗಾವಿ 1, ಬೆಂಗಳೂರು ನಗರ 3, ದಕ್ಷಿಣ ಕನ್ನಡ 1, ಹಾಸನ 1, ಕೊಡಗು 1, ಮೈಸೂರು 1, ಶಿವಮೊಗ್ಗ  ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 775 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 24, ಬೆಂಗಳೂರು ನಗರ 255, ಬೀದರ್ 1, ಚಾಮರಾಜನಗರ 4, ಚಿಕ್ಕಮಗಳೂರು 52, ಚಿತ್ರದುರ್ಗ 9, ದಕ್ಷಿಣ ಕನ್ನಡ 99, ದಾವಣಗೆರೆ 2, ಧಾರವಾಡ 2, ಗದಗ 1, ಹಾಸನ 15, ಕೊಡಗು 55, ಕೋಲಾರ 31, ಮಂಡ್ಯ 12, ಮೈಸೂರು 81, ರಾಯಚೂರು 1, ರಾಮನಗರ 1, ಶಿವಮೊಗ್ಗ 21, ತುಮಕೂರು 29, ಉಡುಪಿ 40, ಉತ್ತರ ಕನ್ನಡ 28, ವಿಜಯಪುರ ಜಿಲ್ಲೆಯಲ್ಲಿ 1   ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 255 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 255 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,45,490  ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,132 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,21,874 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News