ಕಾಂಗ್ರೆಸ್ ಗುಲಾಮಗಿರಿ ಪಕ್ಷ , ನಮ್ಮದು ದೇಶಭಕ್ತಿ ಪಕ್ಷ: ಸಿಎಂ ಬೊಮ್ಮಾಯಿ

Update: 2021-09-27 17:18 GMT

ಹುಬ್ಬಳ್ಳಿ: ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ, ನಮ್ಮದು ದೇಶಭಕ್ತಿ ಪಾರ್ಟಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇಲ್ಲಿನ ಕೆ .ಎಲ್.ಇ. ತಾಂತ್ರಿಕ‌ ವಿಶ್ವವಿದ್ಯಾಲಯ ಆವರಣದಲ್ಲಿ ಸುದ್ದಿಗಾರರ ಜೊತೆ  ಮಾತನಾಡಿದ ಅವರು, ಬಿಜೆಪಿ ತಾಲಿಬಾನ್ ಇದ್ದ ಹಾಗೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. 

'ಕಾಂಗ್ರೆಸ್ ದೇಶಭಕ್ತಿಯನ್ನು ಕೂಡ ಅದೇ ಥರ ಕಾಣುತ್ತದೆ ಎಂದ ಅವರು,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆ ಅವರು ವಹಿಸಿಕೊಂಡ ಜವಾಬ್ದಾರಿಗೆ ಅವರ ಹೇಳಿಕೆಗಳು ತಕ್ಕುದಾಗಿಲ್ಲ' ಎಂದು ಹೆಳಿದರು.

ಕೋವಿಡ್ ಸೋಂಕಿನಿಂದ ಇದೀಗ ತಾನೇ ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆರ್ಥಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು. ಹೀಗಾಗಿ ಭಾರತ್ ಬಂದ್ ಬೇಡ ಎಂದು ಹೋರಾಟಗಾರರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News