ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿ ಸೆರೆಮನೆಯಲ್ಲಿ ಎಷ್ಟು ದಿನ ಬಂಧಿಯಾಗಿದ್ದಿರಿ?: ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

Update: 2021-09-27 09:14 GMT

ಬೆಂಗಳೂರು:  ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರು ಹೇಳಲಿ, ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ಹೋರಾಟ ಮಾಡಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದೆ. 

'ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯ ಗಾಂಧಿ ಯಾವ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದಾರೆ?  ಕಾಂಗ್ರೆಸ್‌ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್‌ ಗಾಂಧಿ ಅವರು ಯಾವ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು? ನೀವು ಸ್ವಾತಂತ್ರ್ಯಕ್ಕೆ ಹೋರಾಡಿ ಯಾವ ಸೆರೆಮನೆಯಲ್ಲಿ, ಎಷ್ಟು ದಿನ ಬಂಧಿಯಾಗಿದ್ದಿರಿ? ಎಂದು ಬಿಜೆಪಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ. 

'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಕ್ಕಿ ಯೋಜನೆಯ ಪ್ರಹಸನ ಸದನದಲ್ಲಿ ಬಟಾಬಯಲಾಗಿದೆ. ಇಷ್ಟರ ಮೇಲೂ ನಾನು ಅಕ್ಕಿ ಕೊಟ್ಟೆ ಎಂದು ಹೋದಲ್ಲಿ ಬಂದಲ್ಲಿ ಬಡಾಯಿಸುವ ಸಿದ್ದರಾಮಯ್ಯ ಅವರನ್ನು ನೋಡಿದಾಗ ಮರುಕವಾಗುತ್ತದೆ. ಎಷ್ಟು ದಿನ ಸುಳ್ಳಿನ ಮೇಲೆ ಹೊರಳಾಡುತ್ತೀರಿ ಸಿದ್ದರಾಮಯ್ಯ?'  ಎಂದು ಬಿಜೆಪಿ ಪ್ರಶ್ನಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News