ವಾರ್ತಾಭಾರತಿ ಹಿರಿಯ ವರದಿಗಾರ ಪ್ರಕಾಶ್ ಗೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ

Update: 2021-09-27 17:17 GMT
ಪ್ರಕಾಶ್ ಸಿ. ರಾಮಜೋಗಿಹಳ್ಳಿ

ಬೆಂಗಳೂರು: ವಾರ್ತಾಭಾರತಿ ಬೆಂಗಳೂರು ಬ್ಯೂರೋದ ಹಿರಿಯ ವರದಿಗಾರ ಪ್ರಕಾಶ್ ಸಿ.ರಾಮಜೋಗಿಹಳ್ಳಿ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2019ನೇ ಸಾಲಿನ ವಿಶೇಷ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ 90 ವರ್ಷಗಳ ಸಾರ್ಥಕ ಹೆಜ್ಜೆಗಳೊಂದಿಗೆ ಮುನ್ನಡೆಯುತ್ತಿದೆ.  ಹಿರಿಯ ಪತ್ರಕರ್ತರೂ, ಖ್ಯಾತ ಸಾಹಿತಿಗಳೂ ಆಗಿದ್ದ ಡಿ.ವಿ ಗುಂಡಪ್ಪ(ಡಿವಿಜಿ) ಅವರು ಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು,  ರಚನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಿಂದ ಪತ್ರಕರ್ತರ ಹಿತಕಾಯುವಲ್ಲಿ ಮುನ್ನಡೆದಿದೆ. ಜೊತೆಗೆ ಪತ್ರಕರ್ತರ ಬೌದ್ಧಿಕ ಉನ್ನತೀಕರಣಕ್ಕಾಗಿ ಸಂದರ್ಭಾನುಸಾರವಾಗಿ ಅನೇಕ ಚಟುವಟಿಕೆಗಳನ್ನು ರಾಜ್ಯದಾದ್ಯಂತ ನಡೆಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ  ಗುಣಾತ್ಮಕ ಕೊಡುಗೆಯನ್ನು ನೀಡುತ್ತಿದೆ.

ಅನೇಕ ಹಿರಿಯರು, ಸುದ್ದಿಮಾಧ್ಯಮಗಳ ಬಗ್ಗೆ ಗೌರವ ಉಳ್ಳವರು ಪತ್ರಕರ್ತರನ್ನು ಉತ್ತೇಜಿಸಲು ಮತ್ತು ಗೌರವಿಸುವ ನಿಟ್ಟಿನಲ್ಲಿ ಸಂಘದಲ್ಲಿ  ಹಿರಿಯ ಸಾಧಕ  ಪತ್ರಕರ್ತರ ಹೆಸರಿನಲ್ಲಿ  ದತ್ತಿ ನಿಧಿ ಪ್ರಶಸ್ತಿಗಳನ್ನು ಸ್ಥಾಪಿಸಿದ್ದಾರೆ.  ರಾಜ್ಯ ಸಂಘವು ಆಹ್ವಾನಿತ ಉತ್ತಮ ವರದಿಗಳಿಗೆ  ಪ್ರಶಸ್ತಿ ನೀಡುವುದಲ್ಲದೆ , ದತ್ತಿನಿಧಿ ಪ್ರಶಸ್ತಿಗಳ ಮೂಲಕ ಹಿರಿಯ, ಪ್ರತಿಭಾವಂತ ಪತ್ರಕರ್ತರನ್ನು ಉತ್ತೇಜಿಸುವ , ಗೌರವಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಬಂದಿದೆ.

ಇದುವರೆಗೂ ಈ ಎಲ್ಲ ಪ್ರಶಸ್ತಿಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಾರ್ಷಿಕ ಸಮ್ಮೇಳನಗಳಲ್ಲಿ ನೀಡಲಾಗುತ್ತಿತ್ತು. ಆದರೆ  ಈ ಬಾರಿ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳನ್ನು  ಇನ್ನಷು  ಘನತೆಯಿಂದ ವಿತರಿಸಬೇಕೆಂಬ ಉದ್ದೇಶದಿಂದ ಪ್ರತ್ಯೇಕವಾಗಿ ನಡೆಸಲು ತೀರ್ಮಾನಿಸಿದ ಪರಿಣಾಮ ಮೊದಲ ಬಾರಿಗೆ ವಾರ್ಷಿಕ ದತ್ತಿ ಪ್ರಶಸ್ತಿಗಳನ್ನು ಮಲೆನಾಡಿನ ಹೆಬ್ಬಾಗಿಲು, ಪತ್ರಿಕೋದ್ಯಮಕ್ಕೆ ತನ್ನದೇ ಆದ ಪ್ರತಿಭೆಗಳನ್ನು ಕೊಡಮಾಡಿರುವ ಹೆಗ್ಗಳಿಕೆ ಹೊಂದಿರುವ ಶಿವಮೊಗ್ಗೆಯಲ್ಲಿ ಪ್ರದಾನ ಮಾಡಲಾಗುತ್ತಿದೆ.

ಈ ಸಮಾರಂಭದ ನಿರ್ವಹಣೆ ಮತ್ತು ಆತಿಥ್ಯವನ್ನು ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದೆ.

ಅ. 3 ರ ರವಿವಾರ ಸಂಜೆ 5.ಕ್ಕೆ ಶಿವಮೊಗ್ಗ ನಗರದ ಕಂಟ್ರಿ ಕ್ಲಬ್‌ನ ಆವರಣದಲ್ಲಿ ಆಯೋಜನೆಗೊಂಡಿರುವ ವರ್ಣರಂಜಿತ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ಸಂಘವು ಗುರುತಿಸಿರುವ ಪತ್ರಕರ್ತರಿಗೆ ನೀಡಲಾಗುತ್ತಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು  ಮಾಜಿ ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ  ಅವರು ನೆರವೇರಿಸಲಿದ್ದಾರೆ. ಕೊರೋನ  ಸಂಕಷ್ಟದ ಸಂದರ್ಭದಲ್ಲಿ ಪತ್ರಕರ್ತರಿಗೆ ಆಸರೆಯಾಗಿ ನಿಂತ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರನ್ನು  ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಗುತ್ತಿದೆ.

ಇದೇ ವೇದಿಕೆಯಲ್ಲಿ ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ 'ಸಿಹಿಮೊಗೆ ಮಾಧ್ಯಮ' ಹೆಸರಿನ ವಿಶೇಷ ಸ್ಮರಣ ಸಂಚಿಕೆಯನ್ನು  ಸಂಸದ  ಬಿ.ವೈ ರಾಘವೇಂದ್ರ ಬಿಡುಗಡೆ ಮಾಡಲಿದ್ದಾರೆ.

ಶಿವಮೊಗ್ಗೆಯ ಪತ್ರಿಕಾ ಛಾಯಾಗ್ರಾಹಕರ ಸಹಭಾಗಿತ್ವದಲ್ಲಿ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಸಹ ಆಯೋಜಿಸಲಾಗಿದ್ದು, ವಿಧಾನಪರಿಷತ್ ಸದಸ್ಯ ಶ್ರೀ ಎಸ್ ರುದ್ರೇಗೌಡ ಉದ್ಘಾಟಿಸಲಿದ್ದಾರೆ.

ಪ್ರಶಸ್ತಿಗಳನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ,  ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಶಯನುಡಿಗಳನ್ನಾಡಲಿದ್ದು, ಶಿವಮೊಗ್ಗ ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ, ಕರ್ನಾಟಕ ಮಾಧ್ಯಮ ಅಕಾಡಮಿ ಸದಸ್ಯರೂ ಆದ  ಕೆ. ವಿ. ಶಿವಕುಮಾರ್  ಸಮಾರಂಭದ ಅಧ್ಯಕ್ಷತೆ  ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಕೆ.ಬಿ. ಅಶೋಕ ನಾಯ್ಕ, ಕುಮಾರ್ ಬಂಗಾರಪ್ಪ,  ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್. ಅರುಣ್, ಮೇಯರ್ ಸುನೀತಾ ಅಣ್ಣಪ್ಪ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ , ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕರ್ನಾಟಕ ಮಾಧ್ಯಮ ಅಕಾಡಮಿ ಸದಸ್ಯ ಗೋಪಾಲ್‌ ಎಸ್. ಯಡಗೆರೆ ಪಾಲ್ಗೊಳ್ಳಲಿದ್ದಾರೆ.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷರಾದ ಬಿ. ವಿ. ಮಲ್ಲಿಕಾರ್ಜುನಯ್ಯ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ವಿಭಾಗದ ಸಂಚಾಲಕ  ಹೆಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್‌ಟೆಲೆಕ್ಸ್ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಹಿಂದೂಸ್ಥಾನಿ ಗಾಯಕ ಉಸ್ತಾದ್ ಹುಮಾಯೂನ್ ಹರ್ಲಾಪುರ ಮತ್ತು ಸಂಗಡಿಗರಿಂದ ವಚನಗಾಯನ ನಡೆಯಲಿದೆ.

ಆಹ್ವಾನಿತಗಣ್ಯರು, ಪತ್ರಕರ್ತರು ಕೋವಿಡ್ ನಿಯಮಗಳನ್ನು ಅನುಸರಿಸಿ ಪಾಲ್ಗೊಳ್ಳಬೇಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ ಕೋರಿದ್ದಾರೆ.

2019 ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ 2019ನೇ ಸಾಲಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ವಿವರಗಳು ಇಂತಿದೆ.

ಡಿವಿಜಿ ಪ್ರಶಸ್ತಿ: ರವಿಹೆಗಡೆ, ಸಂಪಾದಕರು, ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್

ಎಚ್. ಎಸ್.ದೊರೆಸ್ವಾಮಿ ಪ್ರಶಸ್ತಿ: ಬಿ.ಎಂ. ಹನೀಫ್ ಪ್ರಜಾವಾಣಿ

ಗೊಮ್ಮಟ ಮಾಧ್ಯಮ ಪ್ರಶಸ್ತಿ:   ಎಸ್.ಎನ್.ಅಶೋಕಕುಮಾರ್, ಸಂಪಾದಕರು, ಗೊಮ್ಮಟವಾಣಿ

ಪಾಟೀಲ್ ಪುಟ್ಟಪ್ಪ ಪ್ರಶಸ್ತಿ :  ಎಸ್.ಕೆ.ಶೇಷಚಂದ್ರಿಕ, ಹಿರಿಯ ಪತ್ರಕರ್ತರು

ಎಸ್.ವಿ.ಜಯಶೀಲರಾವ್ ಪ್ರಶಸ್ತಿ:  ಅ.ಚ.ಶಿವಣ್ಣ, ಹಿರಿಯ ಪತ್ರಕರ್ತರು

ಪಿ.ಆರ್.ರಾಮಯ್ಯಪ್ರಶಸ್ತಿ: ಯು.ಎಸ್.ಶೆಣೈ, ಸಂಪಾದಕರು, ಕುಂದಪ್ರಭ

ಗರುಡನಗಿರಿ ನಾಗರಾಜ್ ಪ್ರಶಸ್ತಿ: ಕೆ.ಆರ್.ಮಂಜುನಾಥ್, ಸಂಪಾದಕರು, ಮಲೆನಾಡ ಮಂದಾರ
 
ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ : ಕೋಡಿ ಹೊಸಳ್ಳಿ ರಾಮಣ್ಣ, ಹಿರಿಯ ಪತ್ರಕರ್ತರು

ಕಿಡಿ ಶೇಷಪ್ಪ ಪ್ರಶಸ್ತಿ:   ಕೆ.ಎಂ.ರೇಖಾ, ಸಂಪಾದಕರು, ಹೊಸಪೇಟೆ ಟೈಮ್ಸ್

ಪಿ.ರಾಮಯ್ಯ ಪ್ರಶಸ್ತಿ: ರೇವಣ್ಣಸಿದ್ದಯ್ಯ ಮಹಾನುಭವಿಮಠ, ಸಂಪಾದಕರು, ಶಿಡ್ಲು ಪತ್ರಿಕೆ

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ರಶ್ಮಿ, ಬ್ಯೂರೋ ಮುಖ್ಯಸ್ಥೆ ಪ್ರಜಾವಾಣಿ, ಹುಬ್ಬಳ್ಳಿ

ಎಂ. ನಾಗೇಂದ್ರರಾವ್ ಪ್ರಶಸ್ತಿ : ಶಾಂತಕುಮಾರ್ ಕೆ.ಎನ್‌.ಬ್ಯೂರೊ ಮುಖ್ಯಸ್ಥ, ವಿಜಯವಾಣಿ, ಶಿವಮೊಗ್ಗ
 
ಮಿಂಚು ಶ್ರೀನಿವಾಸ್ ಪ್ರಶಸ್ತಿ:  ರಾಮಸ್ವಾಮಿ ಹುಲಕೋಡು, ವಿಜಯಕರ್ನಾಟಕ

ಹೆಚ್.ಎಸ್‌ರಂಗಸ್ವಾಮಿ ಪ್ರಶಸ್ತಿ :  ಪಿ.ಸುನೀಲ್‌ಕುಮಾರ್ ಸಂಪಾದಕರು 'ಸಿಟಿ ಹೈಲೈಟ್ಸ್' ಬೆಂಗಳೂರು

ಸಂಘದ ವಿಶೇಷ ಪ್ರಶಸ್ತಿಗಳು:

ಪ್ರಕಾಶ್ ರಾಮಜೋಗಿಹಳ್ಳಿ- ವಾರ್ತಾಭಾರತಿ ಬೆಂಗಳೂರು

ಪ್ರಹ್ಲಾದಗುಡಿ, ವರದಿಗಾರರು,- ಕನ್ನಡ ಪ್ರಭ, ರಾಯಚೂರು,
 
ಮುನಿವೆಂಕಟೇಗೌಡ -ಹಿರಿಯ ಪತ್ರಕರ್ತರು ಕೋಲಾರ

ಎಂ.ಕೆ ರಾಘವೇಂದ್ರ ಮೇಗರವಳ್ಳಿ- 'ವಿಜಯಕರ್ನಾಟಕ'  ತೀರ್ಥಹಳ್ಳಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News