ಮಂಗಳೂರು : ರೈತರಿಗೆ ಬೆಂಬಲವಾಗಿ ಎಸ್ಡಿಪಿಐಯಿಂದ ಪ್ರತಿಭಟನೆ

Update: 2021-09-27 11:18 GMT

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ತಿದ್ದುಪಡಿ ಮಸೂದೆಗಳ ಜಾರಿ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ವ್ಯಕ್ತಪಡಿಸಿ ಎಸ್ಡಿಪಿಐ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕ್ಲಾಕ್ ಟವರ್ ಬಳಿಯಲ್ಲಿ ರಸ್ತೆ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಕೇಂದ್ರ ಸರಕಾರದ ಕರಾಳ, ಜನವಿರೋಧಿ ನಿಲುವುಗಳನ್ನು ಖಂಡಿಸಿದರು, ನಾಲ್ಕು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ರೈತರು ಈ ದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಇದಕ್ಕೆಲ್ಲವೂ ಕಾರಣ ಸರಕಾರದ ಜನವಿರೋಧಿ ನೀತಿಗಳಾಗಿವೆ. ದೇಶದ ಜೀವನಾಡಿಯಾದ ಅನ್ನದಾತನ ಶಾಪ ಸರಕಾರಕ್ಕೆ ತಟ್ಟಿ ಈ ಸರಕಾರದ ಅವನತಿಗೆ ಕಾರಣವಾಗಲಿದೆ ಎಂದರು.

ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಅಶ್ರಫ್ ಕೆ ಸಿ ರೋಡ್ ಮಾತನಾಡಿದರು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಧ್ಯಕ್ಷ ಯಾಸೀನ್ ಅರ್ಕುಳ, ಉಪಾಧ್ಯಕ್ಷ ಲ್ಯಾನ್ಸೀ ತೋರಸ್, ಉಳ್ಳಾಲ ಕ್ಷೇತ್ರದ ಉಪಾಧ್ಯಕ್ಷ ಝಾಕಿರ್ ಉಳ್ಳಾಲ ಇತರ ಮುಖಂಡರಾದ ಶರೀಫ್ ಪಾಂಡೇಶ್ವರ, ಕಾರ್ಪೊರೇಟರ್ ಮುನೀಬ್ ಬೆಂಗರೆ,  ಸಿದ್ದೀಕ್ ಬೆಂಗರೆ , ಮುಝಮ್ಮಿಲ್ ನೂಯಿ ಇನ್ನಿತರು ಉಪಸ್ಥಿತರಿದ್ದರು. 

ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News