×
Ad

ಬಾವಿಗೆ ಬಿದ್ದು ಯುವಕ ಮೃತ್ಯು

Update: 2021-09-27 20:44 IST

ಶಂಕರನಾರಾಯಣ, ಸೆ.27: ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ಕ್ಷೌರಿಕರಬೆಟ್ಟು ಎಂಬಲ್ಲಿ ಸೆ.27ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಕ್ಷೌರಿಕರ ಬೆಟ್ಟು ನಿವಾಸಿ ಹರೀಶ ಭಂಡಾರಿ(36) ಎಂದು ಗುರುತಿಸಲಾಗಿದೆ. ಇವರು ಮನೆಯ ಬಳಿಯ ಬಾವಿಯಿಂದ ನೀರು ತರಲು ಹೋದಾಗ ಆಕಸ್ಮಿಕವಾಗಿ ಆವರಣ ಇಲ್ಲದ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News